ರಾಷ್ಟ್ರೀಯ
ದಿಲ್ಲಿ ಮಾಜಿ ಸಚಿವ ಸತ್ಯೇಂದ್ರ ಜೈನ್ಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು
ವಾರ್ತಾ ಭಾರತಿ : 26 May, 2023

Satyendar Jain, Photo: Twitter@NDTV
ಹೊಸದಿಲ್ಲಿ: ದಿಲ್ಲಿಯ ಮಾಜಿ ಸಚಿವ ಸತ್ಯೇಂದ್ರ ಜೈನ್ (Satyendar Jain)ಅವರನ್ನು ಐಸಿಯುಗೆ ದಾಖಲಿಸಿದ ಕೇವಲ ಒಂದು ದಿನದ ನಂತರ ವೈದ್ಯಕೀಯ ಕಾರಣಗಳಿಗಾಗಿ ಸುಪ್ರೀಂ ಕೋರ್ಟ್ ಇಂದು ಮಧ್ಯಂತರ ಜಾಮೀನು ನೀಡಿದೆ.
ಉಸಿರಾಟದ ತೊಂದರೆಯಿಂದ ಜೈನ್ ಅವರನ್ನು ದಿಲ್ಲಿಯ ಲೋಕನಾಯಕ ಜೈ ಪ್ರಕಾಶ್ ನಾರಾಯಣ್ (ಎಲ್ಎನ್ಜೆಪಿ) ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಕಳೆದ ವರ್ಷ ಮೇ ತಿಂಗಳಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ಈಡಿ)ದಿಂದ ಎಎಪಿ ನಾಯಕನನ್ನು ಬಂಧಿಸಿದಾಗಿನಿಂದ ಅವರು ತಿಹಾರ್ ಜೈಲಿನಲ್ಲಿದ್ದಾರೆ
‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Comments (Click here to Expand)